ಭಕ್ತಿಗೀತೆಗಳು

Gajavadana Beduve - ಗಜವದನ ಬೇಡುವೆ


ಗಜವದನ ಬೇಡುವೆ ಗೌರಿ ತನಯ
ತ್ರಿಜಗ ವಂದಿತನೇ ಸುಜನರ ಪೊರೆವನೇ

ಪಾಶಾಂಕುಶಧರ ಪರಮ ಪವಿತ್ರ
ಮೂಷಿಕವಾಹನ ಮುನಿಜನಪ್ರೇಮಾ

ಮೋದದಿ ನಿನ್ನಯ ಪಾದವ ತೋರೋ
ಸಾಧು ವಂದಿತನೆ ಆದರದಿಂದಲಿ

ಸರಸಿಜನಾಭ ಶ್ರಿ ಪುರಂದರ ವಿಠಲನ
ನಿರುತ ನೆನೆಯುವಂತೆ ದಯ ಮಾಡೋ

--ಪುರಂದರದಾಸರು
_______________________________________________________________

Pillangoviya cheluva - ಪಿಳ್ಳಂಗೋವಿಯ ಚೆಲುವ


ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ ರಂಗನ ಎಲ್ಲಿ ನೋಡಿದಿರಿ

ಎಲ್ಲಿ ನೋಡಿದರಲ್ಲಿ ತನಿಲ್ಲ ದಿಲ್ಲವೆಂದು ಬಲ್ಲ ಜಾಣರು

ನಂದಗೋಪನ ಮಂದಿರಗಳ ಸಂದುಗೊಂದಿನಲಿ
ಚಂದ ಚಂದದ ಗೋಪ ಬಾಲರ ವೃಂದ ವೃಂದದಲಿ
ಸುಂದರಾಂಗದ ಸುಂದರೀಯರ ಹಿಂದು ಮುಂದಿನಲಿ
ಅಂದದಾಕಳ ಕಂದ ಕರುಗಳ ಮಂದೆ ಮಂದೆಯಲಿ

ಶ್ರೀ ಗುರುಕ್ತ ಸದಾ ಸುಮಂಗಳ ಯೋಗ ಯೋಗದಲಿ
ಅಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ
ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ
ಭಾಗವತರು ಸದಾ ಬಾಗಿ ಪಡುವ ರಾಗ ರಾಗದಲಿ

ಈ ಚರಾಚರದೊಳಗೆ ಜನಂಗಳ ಆಚೆ ಈಚೆಯಲಿ
ಕೆಚರೇಂದ್ರನ ಸುತನ ರಥದ ಚೌಕ ಪೀಠದಲಿ
ನಾಚದೆ ಮಾಧವ ಎಂಬ ಭಕ್ತರ ವಾಚಕಂಗಳಲಿ
ವೀಚುಕೊಂಡದ ಪುರಂದರ ವಿಠಲನ ಲೋಚನಾಗ್ರದಲಿ

--- ಪುರಂದರ ದಾಸರು
___________________________________________________________________

Nammamma Sharade - ನಮ್ಮಮ್ಮ ಶಾರದೆ


ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ
ನಿಮ್ಮೊಳಗಿಹನಾರಮ್ಮಾ

ಕಮ್ಮಗೋಲನ ವೈರಿ ಸುತನಾದ ಸೊಂಡಿಲ
ಹೆಮ್ಮೆಯ ಗಣನಾಥನೇ

ಮೋರೆ ಕಪ್ಪಿನ ಭಾವ ಮೊರದಗಲದ ಕಿವಿ ಕೋರೆದಾಡೆಯನಾರಮ್ಮಾ
ಮೂರುಕಣ್ಣನ ಸುತ ಮುರಿದಿಟ್ಟ ಚಂದ್ರನ ಧೀರ ತಾ ಗಣನಾಥನೇ

ಉಟ್ಟದಟ್ಟಿಯು ಬಿಗಿದುಟ್ಟ ಚೆಲ್ಲಣದ ದಿಟ್ಟ ತಾ ನಿವನಾರಮ್ಮ
ಪಟ್ಟದ ರಾಣಿ ಪಾರ್ವತಿಯ ಕುಮಾರನು ಹೊಟ್ಟೆಯ ಗಣನಾಥನೇ

ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ ಭಾಷಿಗನಿವನಾರಮ್ಮ
ಲೇಸಾಗಿ ಜನರ ಸಲಹುವ ಕಾಗಿನೆಲೆ ಆದಿಕೇಶವ ದಾಸ ಕಣೇ
_____________________________________________________________

Varava Kodu Enage - ವರವ ಕೊಡು ಎನಗೆ

ವರವ ಕೊಡು ಎನಗೆ ವಾಗ್ದೇವಿ ನಿನ್ನ
ಚರಣ ಕಮಲಂಗಳ ದಯಮಾಡು ದೇವಿ

ಶಶಿ ಮುಖದ ನಸು ನಗೆಯ ಬಾಲೆ
ಎಸೆವ ಕರ್ಣದ ಮುತ್ತಿನ ಓಲೆ
ನಸುವ ಸುಪಲ್ಲ ಗುಣಶೀಲೇ ದೇವಿ
ಬಿಸಜಾಕ್ಷಿ ಎನ್ನ ಹೃದಯದೊಳು ನಿಂದು

ಇಂಪು ಸೊಂಪಿನ ಚಂದ್ರ ಬಿಂಬೆ
ಕೆಂಪು ತುಟಿ ನಾಸಿಕದ ರಂಭೆ
ಜೋಂಪು ಮದನನ ಪೂರ್ಣ ಶಕ್ತಿ ಗೊಂಬೆ
ಸಂಪಿಗೆಯ ಮುಡಿದಿಟ್ಟ ವಿದ್ಯಾ

ರವಿ ಕೋಟಿ ತೇಜ ಪ್ರಕಾಶೇ ಮಹಾ
ಕವಿಜನ ಹ್ರಿತ್ಕಮಲ ವಾಸೇ
ಅವಿರಳ ಪುರಿ ಕಾಗಿನೆಲೆಯಾದಿ
ಕೇಶವನ ಸುತನಿಗೆ ಸನ್ನುತ ರಾಣಿವಾಸೆ

-- ಕನಕ ದಾಸರು,
_______________________________________________________

Baagilanu Teredu - ಬಾಗಿಲನು ತೆರೆದು


ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ
ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ

ಪರಮಪದದೊಳಗೆ ವಿಷಧರನ ತಲ್ಪದಲಿ ನೀ
ಸಿರಿಸಹಿತ ಕ್ಷೀರವಾರುಧಿಯೊಳಿರಲು
ಕರಿರಾಜ ಕಷ್ಟದಲಿ ಆದಿಮೂಲಾ ಎಂದು
ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೇ

ಕಡು ಕೋಪದಲಿ ಖಳನು ಖಡುಗವನು ಹಿಡಿದು
ನಿನ್ನೊಡೆಯನೆಲ್ಲಿಹನು ಎಂದು ನುಡಿಯೇ
ದೃಢ ಭಕಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆ
ಸಡಗರದಿ ಕಂಭದಿಂದೊಡೆದೆಯೋ ನರಹರಿಯೇ

ಯಮಸುತನ ರಾಣಿಗೆ ಅಕ್ಷಯವಸನವಿತ್ತೆ
ಸಮಯದಲಿ ಅಜಮಿಳನ ಪೊರೆದೆ
ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ
ಕಮಲಾಕ್ಷ ಕಾಗಿನೆಲೆಯಾದಿ ಕೇಶವನೆ
  ______________________________________________________

Tallanisadiru - ತಲ್ಲಣಿಸದಿರು


ತಲ್ಲಣಿಸದಿರು ಕಂಡ್ಯ ತಾಳು ಮನವೇ
ಎಲ್ಲರನು ಸಲಹುವನು ಇದಕೆ ಸಂಶಯ ಬೇಡ

ಬೆಟ್ಟದ ತುದಿಯಲ್ಲಿ ಬೆಳದ ವೃಕ್ಷಗಳಿಗೆ
ಕಟ್ಟೆಯನು ಕಟ್ಟಿ ನೀರೆರೆದವರು ಯಾರು
ಹುಟ್ಟಿಸಿದ ದೇವನು ತಾ ಹೊಣೆಗಾರನಾಗಿರಲು
ಗಟ್ಯಾಗಿ ಸಲಹುವನು ಸಂಶಯವಿಲ್ಲ

ಕಲ್ಲಿನೋಳ ಹುಟ್ಟಿರುವ ಕ್ರಿಮಿ ಕೀಟಗಳಿಗೆ
ಅಲ್ಲೇ ಆಹಾರವನ್ನು ತಂದಿತ್ತವರು ಯಾರು
ಪುಲ್ಲಲೋಕಾನ ನಮ್ಮ ನೆಲಯಾದಿ ಕೇಶವನು
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ

--ಕನಕದಾಸರು
______________________________________________________

Satyavantara Sangaviralu - ಸತ್ಯವಂತರ ಸಂಗವಿರಲು

ಸತ್ಯವಂತರ ಸಂಗವಿರಲು ತೀರ್ಥವೇತಕೆ
ನಿತ್ಯ ಜ್ಞಾನಿಯಾದ ಮೇಲೆ ಚಿಂತೆ ಯಾತಕೆ

ತಾನು ಉಣ್ಣದ ಪರರಿಗಿಕ್ಕದ ಧನವಿದ್ದೇತಕೆ
ಮಾನ ಹೀನನಾಗಿ ಬಾಳ್ವ ಮನುಜನೇತಕೆ
ಜ್ಞಾನವಿಲ್ಲದೇ ನೂರು ಕಾಲ ಬದುಕಲೇತಕೆ
ಮಾನಿನಿಯ ತೊರೆದವಗೆ ಭೋಗವೇತಕೆ

ಮಾತು ಕೇಳದೆ ಮಲತು ನಡೆವ ಮಕ್ಕಳೇತಕೆ
ಪ್ರೀತಿ ಇಲ್ಲದೆ ಎಡೆಯನಿಕ್ಕಿದ ಅನ್ನವೇತಕೆ
ನೀತಿಯರಿತು ನಡೆಯದಿರುವ ಬಂಟನೇತಕೆ
ಸೋತು ಹೆಣ್ಣಿಗೆ ಹೆದರಿ ನಡೆವ ಪುರುಷನೇತಕೆ

ಸಂಜ್ಞೆಯರಿತು ನಡೆಯದಿರುವ ಸತಿ ಇದ್ದೇತಕೆ
ಮುನ್ನ ಕೊಟ್ಟು ಪಡೆಯದನ್ನು ಬಯಸಲೇತಕೆ
ಮನ್ನಣೆಯ ನಡೆಸದಿರುವ ದೊರೆಯು ಏತಕೆ
ಚೆನ್ನ ಆದಿ ಕೇಶವನಲ್ಲದ ದೈವವೇತಕೆ

--ಕನಕದಾಸರು
  

Dasana MaDiko Enna / ದಾಸನ ಮಾಡಿಕೊ ಎನ್ನ

ದಾಸನ ಮಾಡಿಕೊ ಎನ್ನ ಸ್ವಾಮಿ
ಸಾಸಿರ ನಾಮದ ವೆಂಕಟರಮಣ

ದುರ್ಬುದ್ಧಿಗಳನೆಲ್ಲ ಬಿಡಿಸೊ ನಿನ್ನ
ಕರುಣ-ಕವಚವೆನ್ನ ಹರಣಕೆ ತೊಡಿಸೊ
ಚರಣಸೇವೆ ಎನಗೆ ಕೊಡಿಸೊ ಅಭಯ
ಕರ ಪುಷ್ಪವ ಎನ್ನ ಶಿರದಲ್ಲಿ ಮುಡಿಸೊ

ದೃಢಭಕ್ತಿ ನಿನ್ನಲ್ಲಿ ಬೇಡಿ ನಾ
ಅಡಿಗೆರಗುವೆನಯ್ಯ ಅನುದಿನ ಪಾಡಿ
ಕಡೆಗಣ್ಣಲೇಕೆನ್ನ ನೋಡಿ ಬಿಡುವೆ
ಕೊಡು ನಿನ್ನ ಧ್ಯಾನವ ಮನಶುಚಿ ಮಾಡಿ

ಮೊರೆಹೊಕ್ಕವರ ಕಾಯುವ ಬಿರುದು ಎನ್ನ
ಮರೆಯದೆ ರಕ್ಷಣೆ ಮಾಡಯ್ಯ ಪೊರೆದು
ದುರಿತಗಳೆಲ್ಲವ ತರಿದು ಸಿರಿ
ಪುರಂದರ ವಿಠಲ ಎನ್ನನು ಪೊರೆದು

-- ಪುರಂದರ ದಾಸ,
__________________________________________________________

Ivale Veena Paani - ಇವಳೇ ವೀಣಾ ಪಾಣಿ ವಾಣಿ

ಇವಳೇ ವೀಣಾ ಪಾಣಿ ವಾಣಿ
ತುಂಗಾ ತೀರ ವಿಹಾರಿಣಿ ಶೃಂಗೇರಿ ಪುರ ವಾಸಿನಿ||

ಶಾರದಾ ಮಾತೆ ಮಂಗಳದಾತೆ ಸುರ ಸಂಸೇವಿತೆ ಪರಮ ಪುನೀತೆ
ವಾರಿಜಾಸನ ಹೃದಯ ವಿರಾಜಿತೆ ನಾರದ ಜನನಿ ಸುಜನ ಸಂಪ್ರಿತೇ||1||

ಇವಳೇ ವೀಣಾ ಪಾಣಿ ವಾಣಿ
ತುಂಗಾ ತೀರ ವಿಹಾರಿಣಿ ಶೃಂಗೇರಿ ಪುರ ವಾಸಿನಿ||

ಆದಿ ಶಂಕರ ಅರ್ಚಿತೇ ಮಧುರೆ ನಾದ ಪ್ರಿಯೆ ನವಮಣಿ ಮಯ ಹಾರೆ
ವೇದ ಅಖಿಲ ಶಾಸ್ತ್ರಾ ಆಗಮ ಸಾರೆ ವಿದ್ಯಾ ದಾಯಿನಿ ಯೋಗ ವಿಚಾರೆ||2||

ಇವಳೇ ವೀಣಾ ಪಾಣಿ ವಾಣಿ
ತುಂಗಾ ತೀರ ವಿಹಾರಿಣಿ ಶೃಂಗೇರಿ ಪುರ ವಾಸಿನಿ||
_________________________________________________________________

Krishna nee Begane Baaro - ಕೃಷ್ಣ ನೀ ಬೇಗನೇ ಬಾರೋ

ಕೃಷ್ಣ ನೀ ಬೇಗನೇ ಬಾರೋ

ಬೇಗನೆ ಬಾರೋ ಮುಖವನ್ನು ತೋರೋ

ಕಾಲಾಲಂದುಗೆ ಗೆಜ್ಜೆ ನೀಲದ ಭಾವುಲಿ
ನೀಲವರ್ಣನೆ ನಾಟ್ಯವಾಡುತ್ತ ಬಾರೋ

ಉಡಿಯಲ್ಲಿ ಉಡುಗೆಜ್ಜೆ ಬೆರಳಲ್ಲಿ ಉಂಗುರ
ಕೊರಳಲ್ಲಿ ಹಾಕಿದ ವೈಜಯಂತಿಮಾಲ

ಕಾಶಿ ಪೀತಾಂಬರ ಕೈಯಲ್ಲಿ ಕೊಳಲು
ಪೂಶಿದ ಶ್ರೀ ಗಂಧ ಮೈಯೊಳು ಗಮ್ಮ

ತಾಯಿಗೆ ಬಾಯಲ್ಲಿ ಜಗವನ್ನು ತೋರಿದ
ಜಗದೋದ್ಧಾರಕ ನಮ್ಮ ಉಡುಪಿ ಶ್ರೀ ಕೃಷ್ಣ
_________________________________________________

Vandipe Ninage Gananatha - ವಂದಿಪೆ ನಿನಗೆ ಗಣನಾಥ


ವಂದಿಪೆ ನಿನಗೆ ಗಣನಾಥ
ಮೊದಲೊಂದಿಪೆ ನಿನಗೆ ಗಣನಾಥ
ಬಂದ ವಿಘ್ನ ಕಳೆಯೋ ಗಣನಾಥ||

ಹಿಂದೆ ರಾವಣನು ಮದದಿಂದ ನಿನ್ನ ಪೂಜಿಸದೆ
ಸಂದ ರಣದಲ್ಲಿ ಗಣನಾಥ ||

ಮಾಧವನ ಆಜ್ಞೆಯಿಂದ (ಆದಿಯಲ್ಲಿ ನಿನ್ನ ಪಾದ) ಪೂಜಿಸಿದ ಧರ್ಮರಾಯ
ಸಾಧಿಸಿದ ರಾಜ್ಯ ಗಣನಾಥ ||

ಮಂಗಳ ಮೂರುತಿ ಗುರು ರಂಗ ವಿಠಲನ ಪಾದ
ಭೃಂಗನೆ (ಹಿಂಗದೆ) ಪಾಲಿಸೋ ಗಣನಾಥ ||
  ____________________________________________________________________

Bhagyada Lakshmi Baramma / ಭಾಗ್ಯದ ಲಕ್ಷ್ಮಿ ಬಾರಮ್ಮ

ಭಾಗ್ಯದ ಲಕ್ಷ್ಮಿ ಬಾರಮ್ಮ ನಮ್ಮಮ್ಮಾ ಶ್ರೀ
ಸೌಭಾಗ್ಯದ ಲಕ್ಷ್ಮಿ ಬಾರಮ್ಮಾ

ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ
ಗೆಜ್ಜೆ ಕಾಲ್‌ಗಳ ಧ್ವನಿಯ ತೋರುತ
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ

ಕನಕ ವೃಷ್ಟಿಯ ಕರೆಯುತ ಬಾರೆ
ಮನಕಾಮನೆಯ ಸಿದ್ಧಿಯ ಅವರ
ದಿನಕರ ಕೋಟಿ ತೇಜದಿ ಹೊಳೆಯುವ
ಜನಕರಾಯನ ಕುಮಾರಿ ಬೇಗ

ಶಂಕೆ ಇಲ್ಲದ ಭಾಗ್ಯವ ಕೊಡಲು
ಕಂಕಣ ಕೈಯ ತಿರುವುತ ಬಾರೆ
ಕುಂಕುಮಾಂಕಿತೆ ಪಂಕಜ ಲೋಚನೆ
ವೆಂಕಟರಮಣನ ಬಿಂಕದ ರಾಣಿ

ಅತ್ತಿತ್ತಗಲದೆ ಭಕ್ತರ ಮನೆಯೊಳು
ನಿತ್ಯ ಮಹೋತ್ಸವ ನಿತ್ಯ ಸುಮಂಗಲ
ಸತ್ಯದಿ ತೋರುತ ಸಾಧು ಸಜ್ಜನರಾ
ಚಿತ್ತದಿ ಹೊಳೆಯುವ ಪುತ್ತಳಿ ಗೊಂಬೆ

ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಆಳಗಿರಿ ರಂಗನ
ಚೊಕ್ಕ ಪುರಂದರವಿಠಲನ ರಾಣಿ
--ಪುರಂದರ ದಾಸ, 

ಎಲ್ಲಿ ಹನುಮನೋ ಅಲ್ಲಿ ರಾಮನು (1982) - ಆಕಾಶ ಭೂಮಿಗಳ

ಎಲ್ಲಿ ಹನುಮನೋ ಅಲ್ಲಿ ರಾಮನು (1982) - ಆಕಾಶ ಭೂಮಿಗಳ
ಚಿ. ಉದಯಶಂಕರ್ | ಭಕ್ತಿಗೀತೆ | ೧೯೮೨ | ಎಲ್ಲಿ ಹನುಮನೋ ಅಲ್ಲಿ ರಾಮನು
ಆಲ್ಬಂ: ಎಲ್ಲಿ ಹನುಮನೋ ಅಲ್ಲಿ ರಾಮನು
ರಚನೆ: ಚಿ.ಉದಯಶಂಕರ್
ಸಂಗೀತ: ಉಪೇಂದ್ರಕುಮಾರ್
ಗಾಯನ: ಡಾ.ರಾಜ್‍ಕುಮಾರ್

ಜಗದ ಶಕ್ತಿಗಳೆಲ್ಲ ಒಂದಾಗಿ ನಿಂತಿತೋ
ಜಗವೆಲ್ಲಾ ಆಕ್ರಮಿಸಿ ಈ ಆಕಾರ ಬಂದಿತೋ

ಕರಿಮುಗಿಲೆ ಕೇಶವೊ
ಸೂರ್ಯ-ಚಂದ್ರರೇ ನಯನಗಳೊ
ಸುಳಿವ ಮಿಂಚಿಗಳೆ ನಗೆಯೊ
ಸಿಡಿಲಿಗುಡುಗಳೆಲ್ಲ ನೀನಾಡುವ ನುಡಿಯೊ
ಮೇರುಪರ್ವತವೇ ನೀ ಹಿಡಿದ ಗದೆಯೊ
ಪಾದಕಮಲಗಳೆರಡು ಪಾತಾಳದಲ್ಲಿದೆಯೊ
ಅಂಜನಾಥನಯ್ಯ ವೀರಾಂಜನೇಯ ಮಾರುತಿರಾಯ

ಆಕಾಶ ಭೂಮಿಗಳ ಒಂದು ಮಾಡಿ ನಿಂತ ನಿನ್ನ ಈ ಆಕಾರವೇನು
ಕಣ್ಣುಗಳೆಲ್ಲ ಕೋರೈಸುವ ಕಾಂತಿ ಚೆಲ್ಲುವ ಈ ಭವ್ಯ ರೂಪವೇನು

ನೋಡುವ ಬಗೆ ಹೇಗೆ ನಿನ್ನ ಬೇಡುವ ಬಗೆ ನಿನ್ನ
ಪಾದ ಹುಡುಕಲಾರೆ ಹನುಮ ಮೊಗವ ಕಾಣಲಾರೆ
ಕೋಟಿ ಕಣ್ಣು ಸಾಲದಯ್ಯ ನಿನ್ನ ರೂಪ ತುಂಬಿಕೊಳಲು
ಹೇಗೆ ನಿನ್ನ ಕಾಣಲಯ್ಯ ಹೀಗೆ ನಿಲ್ಲಲು
ನಿಂತ ರೀತಿಯೋ ತನುವ ಕಾಂತಿಯೋ
ಉರಿವ ಸೂರ್ಯ ಹಣತೆ ದೀಪದಂತೆ ಕಾಣುತಿರಲು ಹೀಗೆ
ಆಕಾಶ ಭೂಮಿಗಳ ಒಂದು ಮಾಡಿ ನಿಂತ ನಿನ್ನ ಈ ಆಕಾರವೇನೋ

ನಿನ್ನ ಉಸಿರ ಬಿಸಿಗೆ ಹೆದರಿ ನದಿಗಳಾವಿಯಾಗುತಿರಲು
ದಿವ್ಯ ರೂಪ ಕಂಡ ಗಿರಿಗಳೆಲ್ಲ ನಡುಗುತಿರಲು
ನಿನ್ನ ಭಾರ ತಾಳೆನೆಂದು ಭೂಮಿ ಕುಸಿದು ಹೋಗುತಿರಲು
ಎಲ್ಲಿ ನಾನು ನಿಲ್ಲಲಯ್ಯ ನಿನ್ನ ನೋಡಲು
ರೋಮ ರೋಮದಿ ರಾಮನಾಮವು
ರೋಮ ರೋಮದಿ ರಾಮನಾಮವು
ಶಂಖನಾದ ತಾಳವಾದ್ಯ
ಶಂಖನಾದ ತಾಳವಾದ್ಯ ದಶದಿಕ್ಕಲು ಮೊಳಗುತಿರಲು
ಆಕಾಶ ಭೂಮಿಗಳ ಒಂದು ಮಾಡಿ ನಿಂತ ನಿನ್ನ ಈ ಆಕಾರವೇನು
ಕಣ್ಣುಗಳೆಲ್ಲ ಕೋರೈಸುವ ಕಾಂತಿ ಚೆಲ್ಲುವ ಈ ಭವ್ಯ ರೂಪವೇನು
  

ಯಾವ ದುಂಬಿಗೆ ಯಾವ ಹೂವು (1981) - ಗುರುವಾರ ಬಂತಮ್ಮ

ಯಾವ ದುಂಬಿಗೆ ಯಾವ ಹೂವು (1981) - ಗುರುವಾರ ಬಂತಮ್ಮ
ಗುರುವಾರ ಬಂತಮ್ಮ | ಚಿ. ಉದಯಶಂಕರ್ | ಭಕ್ತಿಗೀತೆ | ೧೯೮೧
ಸಾಹಿತ್ಯ: ಚಿ|| ಉದಯಶಂಕರ್
ಸಂಗೀತ: ಎಂ. ರಂಗರಾವ್
ಗಾಯನ: ಡಾ|| ರಾಜ್‍ಕುಮಾರ್

ಯಾವ ದುಂಬಿಗೆ ಯಾವ ಹೂವು
ಯಾವ ಜಾಣ ಹೇಳುವ
ಯಾರು ಅರಿಯರು ಯಾವ ಹೂವು
ಬೆರೆವುದೊ ನಿನ್ನ ಚರಣವ
ಯಾವ ದುಂಬಿಗೆ ಯಾವ ಹೂವು
ಯಾವ ಜಾಣ ಹೇಳುವ

ಯಾರ ಕೊರಳಲಿ ಯಾವ ಇಂಪನು
ಗುರುವೆ ನೀನಿರಿಸಿರುವೆಯೊ
ಯಾರ ಮನದಲಿ ಯಾವ ಗುಣವನು
ತಂದೆ ನೀ ಬೆರೆಸಿರುವೆಯೊ
ಯಾರ ಬಾಳಲಿ ಕರುಣೆಯಿಂದ
ನೆಮ್ಮದಿಯ ತುಂಬಿರುವೆಯೊ
ನೆಮ್ಮದಿಯ ತುಂಬಿರುವೆಯೊ

ಯಾವ ದುಂಬಿಗೆ ಯಾವ ಹೂವು
ಯಾವ ಜಾಣ ಹೇಳುವ

ಯಾರು ಬಲ್ಲರು ಯಾರ ಪ್ರೇಮಕೆ
ಸೋತು ನೀನು ಒಲಿವೆಯೊ
ಯಾರು ಅರಿಯರು ಯಾರ ಕೂಗಿಗೆ
ನೀನು ಧಾವಿಸಿ ಬರುವೆಯೊ
ಯಾರ ಹೃದಯದ ಗುಡಿಯಲೆನ್ದು
ಜ್ಯೋತಿ ನೀನಾಗಿರುವೆಯೊ
ಜ್ಯೋತಿ ನೀನಾಗಿರುವೆಯೊ

ಯಾವ ದುಂಬಿಗೆ ಯಾವ ಹೂವು
ಯಾವ ಜಾಣ ಹೇಳುವ

ಕೋಟಿ ಜನುಮವು ಸಾಲದಾಗಿದೆ
ಗುರುವೆ ನಿನ್ನ ಅರಿಯಲು
ಕೋಟಿ ಜನುಮವು ಸಾಲದಾಗಿದೆ
ಗುರುವೆ ನಿನ್ನ ಅರಿಯಲು
ದಾರಿ ಕಾಣದೆ ರಾಘವೇಂದ್ರನೆ
ನಿನ್ನ ನಾನು ಸೇರಲು
ನಿನ್ನ ಕೂಗಿದೆ ಕಂಗಳು
ಬಂದು ನಿಲ್ಲೆಯ ಮನದೊಳು
ಬಂದು ನಿಲ್ಲೆಯ ಮನದೊಳು

ಯಾವ ದುಂಬಿಗೆ ಯಾವ ಹೂವು
ಯಾವ ಜಾಣ ಹೇಳುವ
ಯಾರು ಅರಿಯರು ಯಾವ ಹೂವು
ಬೆರೆವುದೊ ನಿನ್ನ ಚರಣವ
ಯಾವ ದುಂಬಿಗೆ ಯಾವ ಹೂವು
ಯಾವ ಜಾಣ ಹೇಳುವ
____________________________________________________